ADVERTISEMENT

ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ಮೇ 2018, 19:30 IST
Last Updated 21 ಮೇ 2018, 19:30 IST
ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು
ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು   

ಬೆಂಗಳೂರು: ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದು ಖಚಿತವಾಗುತ್ತಿದ್ದಂತೆ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು, ಬೆಂಗಳೂರು ಪೊಲೀಸ್‌ ಕಮಿಷನರ್ ಟಿ.ಸುನೀಲ್‌ ಕುಮಾರ್‌, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲಕ್ಷ್ಮಿನಾರಾಯಣ ಭೇಟಿ ನೀಡಿ ಚರ್ಚೆ ನಡೆಸಿದರು.

ಅಧಿಕಾರಿಗಳು ಸಾಮಾನ್ಯವಾಗಿ ಮುಖ್ಯಮಂತ್ರಿ ಕಚೇರಿ ಅಥವಾ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸುತ್ತಾರೆ.

ADVERTISEMENT

‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಮುನ್ನವೇ ಅಧಿಕಾರಿಗಳು ಗೌಡರ ಮನೆಗೆ ಓಡಿದ್ದಾರೆ. ಮಗ ಅಧಿಕಾರ ಸ್ವೀಕರಿಸುವ ಮೊದಲೇ ಸೂಪರ್‌ ಸಿ.ಎಂ ಹಕ್ಕು ಚಲಾಯಿಸಲು ಆರಂಭಿಸಿದ್ದಾರೆ. ಇನ್ನು ಮುಂದೆ ಅವರದ್ದೇ ಆಡಳಿತ’ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.