ಯಾದಗಿರಿ: ‘ಸ್ವಾತಂತ್ರ್ಯ ಪೂರ್ವದಲ್ಲಿ ಹೈದರಾಬಾದ್ ಕರ್ನಾಟಕದಲ್ಲಿ ನಿಜಾಮರ ನಿರಂಕುಶ ಆಡಳಿತ ಇತ್ತು. ಸ್ವಾತಂತ್ರ್ಯ ನಂತರ ದೀರ್ಘಾವಧಿಯ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಜಾಮರ ಆಡಳಿತ ನೆನಪಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟೀಕಿಸಿದರು.
ಸುರಪುರದಲ್ಲಿ ಭಾನುವಾರ ನವಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಕಾಂಗ್ರೆಸ್ನವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ರಾಜ್ಯಕ್ಕೆ ₹ 1.30 ಲಕ್ಷ ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಕೇಂದ್ರದ ಅನುದಾನವನ್ನು ಕಾಂಗ್ರೆಸ್ ಏನು ಮಾಡಿದೆ ಎಂಬುದರ ಬಗ್ಗೆ ಲೆಕ್ಕ ನೀಡಿ. ನಾಲ್ಕು ವರ್ಷದಲ್ಲಿ ₹ 79 ಸಾವಿರ ಕೋಟಿ ಅನುದಾನವನ್ನು ವಿವಿಧ ಯೋಜನೆಗಳಡಿ ಬಿಡುಗಡೆ ಮಾಡಲಾಗಿದೆ. ಆದರೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿದ್ದರಾಮಯ್ಯನವರು ಕೇಂದ್ರದ ಯೋಜನೆಗಳನ್ನು ಏಕೆ ಅನುಷ್ಠಾನಗೊಳಿಸಿಲ್ಲ? ಇದನ್ನು ನೀವು ಪ್ರಶ್ನಿಸಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.