ನವದೆಹಲಿ: ‘ಪ್ರಜಾ ಪರಿವರ್ತನ ಪಕ್ಷದ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಅಧಿಕೃತ ಚಿಹ್ನೆ ನೀಡಲಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ, ಜಮಖಂಡಿ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಪಕ್ಷದ ಅಧ್ಯಕ್ಷ ಬಿ.ಗೋಪಾಲ ತಿಳಿಸಿದರು.
ಅಕ್ಟೋಬರ್ನಲ್ಲಿ ಪಕ್ಷದ ನೋಂದಣಿಗೆ ಅರ್ಜಿ ಸಲ್ಲಿಸಲಾಗಿತ್ತಾದರೂ, ಪ್ರಕ್ರಿಯೆ ಇದೀಗ ಪೂರ್ಣಗೊಂಡಿದೆ ಎಂದು ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದ 25 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿ ಎಂಬ ಬೇಡಿಕೆಯನ್ನು ಕಾರ್ಯಕರ್ತರು ಇರಿಸಿದ್ದಾರೆ. ಇದೇ 18ರಂದು ಬಾಗಲಕೋಟೆಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಅಂದೇ ಸ್ಪರ್ಧೆಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸರ್ಕಾರ ರಚಿಸುವ ಪ್ರಬಲ ಅಸ್ತ್ರವಾದ ಮತವನ್ನು ಆಮಿಷಕ್ಕೆ ಬಲಿಯಾಗಿ ದುಡ್ಡಿಗೆ ಮಾರಾಟ ಮಾಡಿಕೊಳ್ಳುವುದು ಸರಿಯಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದಾರೆ. ಮತ ಮಾರಾಟದಿಂದ ಜನ ಭ್ರಷ್ಟರಾದರೆ, ಮತ ಖರೀದಿಸುವ ಭ್ರಷ್ಟ ರಾಜಕಾರಣಿ ಮತ್ತಷ್ಟು ಭ್ರಷ್ಟನಾಗುತ್ತಾನೆ. ಹಾಗಾಗಿ, ಮತ ಮಾರಾಟ ಪ್ರಕ್ರಿಯೆ ನಿಂತರೆ ಮಾತ್ರ ಬಡವರ ಪರ ಸರ್ಕಾರ ಸ್ಥಾಪನೆಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.