ADVERTISEMENT

‘ಪ್ರಣಾಳಿಕೆಗಳಲ್ಲಿ ಮಕ್ಕಳ ಹಿತ ನಿರ್ಲಕ್ಷ

​ಪ್ರಜಾವಾಣಿ ವಾರ್ತೆ
Published 4 ಮೇ 2018, 20:27 IST
Last Updated 4 ಮೇ 2018, 20:27 IST

ಬೆಂಗಳೂರು: ‘ವಿಧಾನಸಭೆ ಚುನಾವಣೆಗೆ ಮುನ್ನ ವಿವಿಧ ಪಕ್ಷಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮಕ್ಕಳ ಹಿತವನ್ನು ನಿರ್ಲಕ್ಷಿಸಲಾಗಿದೆ’ ಎಂದು ಕ್ರಿಸ್ಪ್‌ (ಸಿಆರ್‌ಐಎಸ್‌ಪಿ) ಸರ್ಕಾರೇತರ ಸಂಸ್ಥೆ ಆರೋಪಿಸಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕುಮಾರ ಜಹಗೀರ್‌ದಾರ್‌ ಮಾತನಾಡಿ, ‘ಮಕ್ಕಳ ಮೇಲಿನ ದೌರ್ಜನ್ಯ, ಮಾನಸಿಕ ಒತ್ತಡ, ಅರ್ಧದಲ್ಲಿಯೇ ಶಾಲೆ ಬಿಡುವ ಪ್ರಕರಣಗಳು ಹೆಚ್ಚುತ್ತಿವೆ. ಆದರೂ ಯಾವುದೇ ಪಕ್ಷಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ರಾಜ್ಯದ ಪ್ರಮುಖ ಪಕ್ಷಗಳ ಪ್ರಣಾಳಿಕೆಯಲ್ಲಿಯೂ ಮಕ್ಕಳ ಹಿತ ಕಾಯುವ ಅಂಶಗಳು ಇಲ್ಲ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT