ADVERTISEMENT

ಪ್ರಾಂಶುಪಾಲ, ಗ್ರಾ.ಪಂ ಸದಸ್ಯ ಬಂಧನ

​ಪ್ರಜಾವಾಣಿ ವಾರ್ತೆ
Published 6 ಜೂನ್ 2018, 19:30 IST
Last Updated 6 ಜೂನ್ 2018, 19:30 IST
ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಶಿಕ್ಷಕರಿಗೆ ಹಣ ಹಂಚಲು ತಂದಿದ್ದ ಕವರ್‌ಗಳನ್ನು ಬುಧವಾರ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡರು
ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಶಿಕ್ಷಕರಿಗೆ ಹಣ ಹಂಚಲು ತಂದಿದ್ದ ಕವರ್‌ಗಳನ್ನು ಬುಧವಾರ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡರು   

ಕುಶಾಲನಗರ (ಕೊಡಗು ಜಿಲ್ಲೆ): ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರವಾಗಿ ಮತದಾರ ಶಿಕ್ಷಕರಿಗೆ ಹಣ ಹಂಚುತ್ತಿದ್ದ ಇಬ್ಬರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಹೆಬ್ಬಾಲೆ ಖಾಸಗಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಎನ್.ಧರ್ಮಪ್ಪ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಕೆ.ವಿಶ್ವನಾಥ್ ಬಂಧಿತರು.

ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಶಿಕ್ಷಕರಿಗೆ ಕರಪತ್ರದ ಜೊತೆಗೆ ಕವರ್‌ನಲ್ಲಿ ₹500 ಮುಖಬೆಲೆಯ ಎರಡು ನೋಟುಗಳನ್ನು ಇಟ್ಟು ಹಂಚುತ್ತಿದ್ದ ವೇಳೆ ಬಂಧಿಸಲಾಗಿದೆ. ಚುನಾವಣಾಧಿಕಾರಿ ಧರ್ಮರಾಜ್, ಸಹಾಯಕ ಚುನಾವಣಾಧಿಕಾರಿ ಟಿ.ಪಿ.ಸತ್ಯ ನೇತೃತ್ವದಲ್ಲಿ ಕಾರು ಪರಿಶೀಲಿಸಿ ಪ್ರಚಾರ ಸಾಮಗ್ರಿ, ₹ 40 ಸಾವಿರ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.