ADVERTISEMENT

ಬಸ್‌ನಲ್ಲಿ ರಾಜಭವನದತ್ತ ಕಾಂಗ್ರೆಸ್‌ ಶಾಸಕರು; ಬಳಿಕ ರೆಸಾರ್ಟ್‌ಗೆ

​ಪ್ರಜಾವಾಣಿ ವಾರ್ತೆ
Published 16 ಮೇ 2018, 11:23 IST
Last Updated 16 ಮೇ 2018, 11:23 IST
ಶಾಸಕರ ‍ಪಟ್ಟಿ ಪ್ರದರ್ಶನ– ಚಿತ್ರ ಕೃಪೆ: ಎಎನ್‌ಐ
ಶಾಸಕರ ‍ಪಟ್ಟಿ ಪ್ರದರ್ಶನ– ಚಿತ್ರ ಕೃಪೆ: ಎಎನ್‌ಐ   

ಬೆಂಗಳೂರು: ಕುದುರೆ ವ್ಯಾಪಾರ ತಪ್ಪಿಸಲು ಕಾಂಗ್ರೆಸ್‌ ಶಾಸಕರನ್ನು ಬಿಡದಿ ಸಮೀಪದ ಈಗಲ್ಟನ್‌ ರೆಸಾರ್ಟ್‌ಗೆ ಕರೆದೊಯ್ಯಲಾಗುತ್ತಿದೆ.

ಕೆಪಿಸಿಸಿ ಕಚೇರಿಯಿಂದ ಖಾಸಗಿ ಬಸ್‌ ಮೂಲಕ ಶಾಸಕರನ್ನು  ಮೊದಲು ರಾಜಭವನದಕ್ಕೆ ಕರೆದೊಯ್ಯಲಾಗುತ್ತಿದೆ. ಬಳಿಕ ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ.

ಸಂಜೆ 5 ಗಂಟೆಗೆ ರಾಜ್ಯಪಾಲರು ಭೇಟಿಗೆ ಕಾಂಗ್ರೆಸ್‌ ಶಾಸಕರಿಗೆ ಸಮಯ ನೀಡಿದ್ದಾರೆ. ಬೆಂಬಲ ಪತ್ರ ನೀಡಲಿರುವ ಶಾಸಕರಿಂದ ರಾಜ್ಯಪಾಲರ ಎದುರು ಪರೇಡ್‌ ನಡೆಯಲಿದೆ.

ADVERTISEMENT

ಡಿ.ಕೆ.ಶಿವಕುಮಾರ್‌ ಶಾಸಕರನ್ನು ರೆಸಾರ್ಟ್‌ಗೆ ತಲುಪಿಸುವ ಜವಾಬ್ದಾರಿ ವಹಿಸಿದ್ದಾರೆ.

ನಗರದ ಶಾಂಗ್ರಿಲಾ ಹೋಟೆಲ್‌ನಿಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ರಾಜಭವನದ ಕಡೆಗೆ ಪ್ರಯಾಣಿಸಿದ್ದಾರೆ. ಕಾಂಗ್ರೆಸ್‌–ಜೆಡಿಎಸ್‌ ಶಾಸಕರು ಸರ್ಕಾರ ರಚನೆಗಾಗಿ ರಾಜ್ಯ‍ಪಾಲರಲ್ಲಿ ಮನವಿ ಮಾಡಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.