ADVERTISEMENT

ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು

ಏಜೆನ್ಸೀಸ್
Published 24 ಮೇ 2018, 12:47 IST
Last Updated 24 ಮೇ 2018, 12:47 IST
ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು
ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು   

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತು ವೇಳೆ ಬಿಜೆಪಿಗೆ ಬೆಂಬಲಿಸುವಂತೆ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ದೂರು ನೀಡಿದ್ದಾರೆ.

ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸುವಂತೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರ ವಿರುದ್ಧ ಕ್ರಿಮಿನಲ್‌ ಪಿತೂರು ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕದ ವಕೀಲರು ದೂರಿನಲ್ಲಿ ಹೇಳಿದ್ದಾರೆ.

ಈ ಸಂಬಂಧ ಅವರು, ಎಸಿಬಿಯ ಬೆಂಗಳೂರು ನಗರ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.