ADVERTISEMENT

ಬಿಎಸ್‌ವೈ ವಿರುದ್ಧ ದುರ್ಬಲ ಅಭ್ಯರ್ಥಿ?

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಶಿವಮೊಗ್ಗ: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಶಿಕಾರಿಪುರದಲ್ಲಿ ಕಾಂಗ್ರೆಸ್‌ ದುರ್ಬಲ ಅಭ್ಯರ್ಥಿ ಹಾಕಿರುವುದಕ್ಕೆ ಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದೆ.

ಶಿಕಾರಿಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಿ.ಬಿ. ಮಾಲತೇಶ್ ಅವರನ್ನು ಕಣಕ್ಕೆ ಇಳಿಸಲಾಗಿದೆ. ಪುರಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಅವರು ಬೇರೆ ಯಾವ ಚುನಾವಣೆಯನ್ನೂ ಎದುರಿಸಿಲ್ಲ. ಹೀಗಾಗಿ ಅವರ ಆಯ್ಕೆಗೆ ಪಕ್ಷದ ಹಲವರು ಅಪಸ್ವರ ಎತ್ತಿದ್ದಾರೆ.

ಸಿದ್ದರಾಮಯ್ಯ ಅವರನ್ನು ಸೋಲಿಸಲು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ಅಲ್ಲಿ ಜೆಡಿಎಸ್ ಪ್ರಬಲ ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರನ್ನು ಕಣಕ್ಕೆ ಇಳಿಸಿದೆ. ಆದರೆ, ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಸಿದ್ದರಾಮಯ್ಯ ಇಲ್ಲಿ ಏಕೆ ಪ್ರಬಲ ಅಭ್ಯರ್ಥಿಯನ್ನು ಘೋಷಿಸಲಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.