ಬೆಂಗಳೂರು: ಆರ್.ಸಿ ಕಾಲೇಜನಲ್ಲಿ ನಡೆಯುತ್ತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆಯಲ್ಲಿ ಗೊಂದಲ ಸೃಷ್ಟಿಯಾಗಿದೆ.
ಸರಿಯಾದ ಸಮಯಕ್ಕೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಸ್ಟ್ರಾಂಗ್ ರೂಂ ತೆರೆಯಲು ಸಾಧ್ಯವಾಗಿಲ್ಲ.
ಇವಿಎಂ ಯಂತ್ರಗಳನ್ನು ಸಂಗ್ರಹಿಸಿರುವ ಸ್ಟ್ರಾಂಗ್ ರೂಂ ತೆರೆಯದೆ ಮತ ಎಣಿಕೆ ವಿಳಂಬವಾಗಿದೆ. ಹೀಗಾಗಿ ಮಾಧ್ಯಮದವರನ್ನು ಅಧಿಕಾರಿಗಳು ಹೊರ ಪ್ರವೇಶಿಸಲು ಬಿಟ್ಟಿಲ್ಲ.
ಮತ ಎಣಿಕೆ ಅರ್ಧ ತಾಸು ವಿಳಂಬವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.