ADVERTISEMENT

'ಬೇಕಾದರೆ ನಿಮಗೆ ಬರೆದುಕೊಡ್ತೀನಿ, ನಮಗೆ 125ರಿಂದ 130 ಸೀಟು ಸಿಗಲಿದೆ'

​ಪ್ರಜಾವಾಣಿ ವಾರ್ತೆ
Published 13 ಮೇ 2018, 6:34 IST
Last Updated 13 ಮೇ 2018, 6:34 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ನಮಗೆ ಯಾವುದೇ ಭಯ ಇಲ್ಲ. ಯಾವುದೇ ಪಕ್ಷದ ಸಹಕಾರ ನಮಗೆ ಬೇಕಾಗಿಲ್ಲ. ನಮಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಶೇ. 71 ರಷ್ಟು ಮತದಾನ ಆಗಿದೆ. ಜನರು ಅತ್ಯಂತ ಉತ್ಸಾಹದಿಂದ ಮತ ಚಲಾವಣೆ ಮಾಡಿದ್ದು ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟ, ರೈತ ವಿರೋಧಿ. ಕಾಂಗ್ರೆಸ್ ಪಕ್ಷ 70 ಕ್ಕೂ ಹೆಚ್ಚು ಸೀಟ್ ಗೆಲ್ಲಲ್ಲ ಆದರೆ ಬಿಜೆಪಿ 130ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ. ಜೆಡಿಎಸ್ 22-23 ಸೀಟುಗಳನ್ನು ಗೆಲ್ಲಲಿದೆ. ಪಕ್ಷೇತರರು 2 ರಿಂದ 4 ಸ್ಥಾನ ಗೆಲ್ಲುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT