ಬೆಂಗಳೂರು: ‘ಚೀನಾ ಗೂಡ್ಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೆ ಗ್ಯಾರಂಟಿಯೂ ಇಲ್ಲ, ವಾರಂಟಿಯೂ ಇಲ್ಲ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹರಿಹಾಯ್ದರು.
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಬೆಂಗಳೂರನ್ನು ಕ್ರೈಂ ಸಿಟಿ ಎಂದು ಮೂದಲಿಸುವ ಮೂಲಕ ಮೋದಿ ಬೆಂಗಳೂರಿನ ಖ್ಯಾತಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಕ್ರೈಂ ಹೆಚ್ಚಿದೆ ಎಂಬುದನ್ನು ಮರೆಯಬಾರದು’ ಎಂದರು.
‘ಮೋದಿಯವರು, ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಬಗ್ಗೆ ಮಾತನಾಡುತ್ತಾರೆ. ಆದರೆ, ಉತ್ತರ ಪ್ರದೇಶದಲ್ಲಿ ಅವರದ್ದೇ ಪಕ್ಷದವರು ಅತ್ಯಾಚಾರ ಮಾಡುವುದು, ಜೈಲಿನಲ್ಲಿ ಹತ್ಯೆ ನಡೆಸುವುದು ಅವರ ಕಣ್ಣಿಗೆ ಕಾಣುವುದಿಲ್ಲವೇ’ ಎಂದು ಕೆಣಕಿದರು.
‘ಮೋದಿಯವರೇ, ನಮ್ಮ ಕಾಲಕ್ಕಿಂತ ನಿಮ್ಮ ಕಾಲದಲ್ಲಿ ಕ್ರೈಂ ಹೆಚ್ಚಾಗಿತ್ತು. ಬೆಂಗಳೂರು ಗಾರ್ಬೇಜ್ ಸಿಟಿ ಅನ್ನಿಸಿಕೊಂಡದ್ದೂ ನಿಮ್ಮ ಕಾಲದಲ್ಲಿ. ಅದನ್ನು ಸರಿ ಮಾಡಿದ್ದು ನಾವು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.