ಶಿವಮೊಗ್ಗ: ‘ಪ್ರಮಾಣ ವಚನ ಸ್ವೀಕರಿಸಲು ಯಡಿಯೂರಪ್ಪ ದಿನ ನಿಗದಿ ಮಾಡಿಕೊಂಡು ಬಿಟ್ಟಿದ್ದಾನೆ. ಮಿಸ್ಟರ್ ಯಡಿಯೂರಪ್ಪ... ನೀನು ಏನೇ ತಿಪ್ಪರಲಾಗ ಹಾಕಿದರೂ ಮತ್ತೆ ಈ ರಾಜ್ಯದ ಸಿ.ಎಂ ಆಗಲಾರೆ’
– ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಕಿಚಾಯಿಸಿದ ಪರಿ.
ಶಿಕಾರಿಪುರ, ಸೊರಬದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೆ ಪ್ರಜಾಸತ್ತಾತ್ಮಕವಾಗಿ ನಡೆಯುವುದರಿಂದ ಕುಟುಂಬ ರಾಜಕಾರಣವನ್ನು ತಾವು ವಿರೋಧಿಸುವುದಿಲ್ಲ ಎಂದರು.
‘ಅಂದು ಜೈಲಿಗೆ ಹೋದವರಿಗೆ ಟಿಕೆಟ್ ನೀಡಿರುವುದನ್ನು ನೋಡಿದರೆ ಅಲಿಬಾಬ ಮತ್ತು ನಲವತ್ತು ಮಂದಿ ಕಳ್ಳರ ಕಥೆ ನೆನಪಾಗುತ್ತದೆ’ ಎಂದು ಛೇಡಿಸಿದರು.
ಮೋದಿ ಭಾಷಣದಲ್ಲಿ ಶೇ 90ರಷ್ಟು ಸುಳ್ಳುಗಳೇ ತುಂಬಿರುತ್ತವೆ. ಇತಿಹಾಸ ತಿರುಚುವುದೇ ಬಿಜೆಪಿಯ ಹವ್ಯಾಸ ಎಂದು ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.