ಬೆಂಗಳೂರು: ಬಿಜೆಪಿ ಈಗ ಸರ್ಕಾರ ರಚಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿ ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಹುಮತ ಸಾಬೀತು ಮಾಡಲಿದೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ನಗರದಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಅತ್ಯಂತ ವಿಶ್ವಾಸದಿಂದಲೇ ಮಾತನಾಡಿದ ಅವರು, ಸಿದ್ದರಾಮ್ಯಯ ಅವರು ಬೇರೆ ದಾರಿಯಲ್ಲಿ ಅಧಿಕಾರ ಹಿಡಿಯಲು ಹವಣಿಕೆ ಮಾಡುತ್ತಿದ್ದಾರೆ. ಸರ್ಕಾರ ಅಧಿಕಾರದಲ್ಲಿದ್ದಾಗ ಜನಪರವಾದ ಯಾವ ಕೆಲಸವನ್ನೂ ಅವರು ಮಾಡಿಲ್ಲ ಎಂದರು.
ಬಿಜೆಪಿ ಅಧಿಕಾರ ಮಾಡಲು ಜನ ಆದೇಶ ನೀಡಿದ್ದಾರೆ. ಅದರಂತೆ, ಯಡಿಯೂರಪ್ಪ ಅವರು ಇಂದು ಪ್ರಮಾಣವಚನ ಸ್ವೀರಿಸಿದ್ದಾರೆ. ನಾವು ಬಹುಮತ ಸಾಬೀತು ಮಾಡುತ್ತೇವೆ ಎಂದು ಹೇಳಿದರು.
104 ಸ್ಥಾನ ಇರುವ ನೀವು ಬಹುಮತವನ್ನು ಹೇಗೆ ಸಾಬೀತುಪಡಿಸುವಿರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲ, ಪಕ್ಷೇತರರು ಸಂಪರ್ಕದಲ್ಲಿದ್ದಾರೆ. ಬಹಳಷ್ಟು ಜನ ನಮ್ಮ ಜತೆ ಬರುತ್ತಾರೆ. ನಮ್ಮ ಜತೆಗೆ ನೀವು ಊಹಿಸಲೂ ಸಾಧ್ಯವಾಗದಷ್ಟು ಜನ ಬರುತ್ತಾರೆ ಮತ್ತು ಬಹುಮತವನ್ನೂ ನೀಡಲಿದ್ದಾರೆ. ಕಾದು ನೋಡಿ ಎಂದರು.
* ಇವನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.