ಕಲಬುರ್ಗಿ: ಸಮೀಪದ ಕಾಳಗಿಯಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ನೆತ್ತಿ ಸುಡುವ ಬಿಸಿನಲ್ಲಿ ಜನರು ಕಾದು ಕುಳಿತಿದ್ದು, ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.
ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕ ಡಾ.ಉಮೇಶ್ ಜಾಧವ್, ಅಭ್ಯರ್ಥಿಗಳಾದ ಅಲ್ಲಮಪ್ರಭು ಪಾಟೀಲ, ಕನ್ನೀಜ್ ಫಾತಿಮಾ ಭಾಗವಹಿಸಿದ್ದಾರೆ.
ಗುರುದ್ವಾರಕ್ಕೆ ಭೇಟಿ
ಬೀದರ್: ಇಲ್ಲಿಯ ಗುರುದ್ವಾರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಗುರು ಗ್ರಂಥ ಸಾಹೀಬ ದಶ೯ನ ಪಡೆದರು. ನಂತರ ಹೊಸ ಕಟ್ಟಡ ವೀಕ್ಷಿಸಿ ವಿಮಾನ ನಿಲ್ದಾಣದತ್ತ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.