ADVERTISEMENT

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ– ಬಿಎಸ್‌ವೈ ಘೋಷಣೆ; ರೊಚ್ಚಿಗೆದ್ದ ಕಾರ್ಯಕರ್ತರು, ಲಘು ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 10:27 IST
Last Updated 23 ಏಪ್ರಿಲ್ 2018, 10:27 IST
ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ– ಬಿಎಸ್‌ವೈ ಘೋಷಣೆ; ರೊಚ್ಚಿಗೆದ್ದ ಕಾರ್ಯಕರ್ತರು, ಲಘು ಲಾಠಿ ಪ್ರಹಾರ
ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ– ಬಿಎಸ್‌ವೈ ಘೋಷಣೆ; ರೊಚ್ಚಿಗೆದ್ದ ಕಾರ್ಯಕರ್ತರು, ಲಘು ಲಾಠಿ ಪ್ರಹಾರ   

ಮೈಸೂರು: ವರುಣಾ ಕ್ಷೇತ್ರದಲ್ಲಿ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ‍್ಪ ಘೋಷಿಸಿದ ಬೆನ್ನಲೇ ಕಾರ್ಯಕರ್ತರು ಗದ್ದಲ ಎಬ್ಬಿಸಿದ್ದಾರೆ.

ರೊಚ್ಚಿಗೆದ್ದ ಕಾರ್ಯಕರ್ತರು ವೇದಿಕೆ ಮೇಲಿದ್ದ ಕುರ್ಚಿಗಳನ್ನು ಬಿಸಾಡಿ ಅಸಮಾಧಾನ ವ್ಯಕ್ತಪಡಿಸಿದರು. ವಿಜಯೇಂದ್ರ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅವರ ಸ್ಪರ್ಧೆಗೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಸೋಮವಾರ ನಂಜನಗೂಡಿನಲ್ಲಿ ನಡೆದ ವರುಣಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ‘ವರುಣಾದಿಂದ ಸಾಮಾನ್ಯ ಅಭ್ಯರ್ಥಿಯನ್ನು ಕಣಳಿಕ್ಕಿಳಿಸಿ ಗೆಲ್ಲಿಸುತ್ತೇವೆ. ಹೀಗಾಗಿ, ವಿಜಯೇಂದ್ರ ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದಿಲ್ಲ’ ಎಂದು ಪ್ರಕಟಿಸಿದರು.

ADVERTISEMENT

ವಿಜಯೇಂದ್ರ ಕೇವಲ ವರುಣಾ ಕ್ಷೇತ್ರಕ್ಕೆ ಸೀಮಿತವಾಗಿರದೆ ಮೈಸೂರು–ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಇನ್ನು 20 ದಿನ ಇಲ್ಲಿಯೇ ಇದ್ದು ಪ್ರಚಾರ ನಡೆಸಲಿದ್ದಾನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.