ADVERTISEMENT

ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ. ರಂಗಪ್ಪಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2018, 17:25 IST
Last Updated 16 ಜೂನ್ 2018, 17:25 IST

ಮೈಸೂರು: ‘ಶಿಕ್ಷಣ ಇಲಾಖೆಯ ಸಲಹೆಗಾರರನ್ನಾಗಿ ನೇಮಕ ಮಾಡಿದರೆ 6 ತಿಂಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆ ತರುತ್ತೇನೆ. ಇದಕ್ಕೆ ಆಹ್ವಾನವೂ ಬಂದಿದೆ’ ಎಂದು ಜೆಡಿಎಸ್‌ ಮುಖಂಡ ಪ್ರೊ.ಕೆ.ಎಸ್‌.ರಂಗಪ್ಪ ಹೇಳಿದರು.

‘ಸಿಂಗಪುರ, ಜಪಾನ್‌ ಸೇರಿದಂತೆ ವಿವಿಧ ರಾಷ್ಟ್ರಗಳ ವಿಶ್ವವಿದ್ಯಾಲಯಗಳಿಗೆ ನಾನು ಶೈಕ್ಷಣಿಕ ಸಲಹೆಗಾರನಾಗಿದ್ದೇನೆ. ಅಲ್ಲಿನ ಸುಧಾರಿತ ವ್ಯವಸ್ಥೆಯನ್ನು ಬಲ್ಲೆ. ಇದರ ಆಧಾರದ ಮೇಲೆ ರಾಜ್ಯದ ಶೈಕ್ಷಣಿಕ ಸ್ಥಿತಿಗತಿ ಸುಧಾರಿಸುವಂತೆ ನನಗೆ ಆಹ್ವಾನ ಬಂದಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT