ಬಾಗಲಕೋಟೆ: ‘ಶ್ರೀರಾಮುಲುಗೂ ಬಾದಾಮಿಗೂ ಏನು ಸಂಬಂಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ವಿವಿಧ ಸಮಾಜಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರ ಜತೆ ಸೇರಿ ಬಳ್ಳಾರಿ, ಹೊಸಪೇಟೆಯ ಗುಡ್ಡಗಳನ್ನು ಖಾಲಿ ಮಾಡಿ ಬಂದಿರುವ ಶ್ರೀರಾಮುಲು ಈಗ ಬಾದಾಮಿಯ ಬೆಟ್ಟಗಳನ್ನು ನಾಶ ಮಾಡಲು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
‘ನಾನೇ ಮುಖ್ಯಮಂತ್ರಿ’: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಶೇಕಡ ನೂರರಷ್ಟು ನಿಜ. ನಾನೇ ಮತ್ತೆ ಮುಖ್ಯಮಂತ್ರಿಯಾಗಲಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿಗಳಾಗಿ ಯಡಿಯೂರಪ್ಪ, ಕುಮಾರಸ್ವಾಮಿ ಸಾಧನೆ ಶೂನ್ಯ ಎಂದೂ ಸಿದ್ದರಾಮಯ್ಯ ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.