ಬೆಂಗಳೂರು: ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನನ್ನು ಆಯ್ಕೆ ಮಾಡಲಾಗುವುದು. ಬಳಿಕ, ನಾವು ತಕ್ಷಣ ರಾಜಭವನಕ್ಕೆ ಹೋಗುತ್ತೇವೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಬೆಳಿಗ್ಗೆ ಪಕ್ಷದ ಶಾಸಕಾಂಗ ಸಭೆಗೆ ಬಂದ ಅವರು ಸುದ್ದಿಗಾರರ ಜತೆ ಮಾತನಾಡಿ, ಸಭೆ ಬಳಿಕ ರಜ್ಯಪಾಲರನ್ನು ಭೇಟಿ ಮಾಡಿ ನಾವು ಸರ್ಕಾರವನ್ನು ರಚಿಸಲು ನಮ್ಮ ಹಕ್ಕನ್ನು ಮಂಡಿಸುತ್ತೇವೆ. ಹೆಚ್ಚಿನ ಅಂಶ ನಾಳೆ ವರೆಗೆ ಸಮಯ ನೀಡುವಂತೆ ರಾಜ್ಯಪಾಲರನ್ನು ಕೇಳುತ್ತೇವೆ ಎಂದರು.
ಜತೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.