ADVERTISEMENT

ಹೈದರಾಬಾದ್‌ನಿಂದ ಬೆಂಗಳೂರು ತಲುಪಿದ ಕಾಂಗ್ರೆಸ್‌, ಜೆಡಿಎಸ್‌ ಶಾಸಕರು

​ಪ್ರಜಾವಾಣಿ ವಾರ್ತೆ
Published 19 ಮೇ 2018, 1:49 IST
Last Updated 19 ಮೇ 2018, 1:49 IST
ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬಂದ ಬಸ್ ಬೆಳಿಗ್ಗೆ ಬೆಂಗಳೂರು ತಲುಪಿತು – ಎಎನ್‌ಐ ಚಿತ್ರ
ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬಂದ ಬಸ್ ಬೆಳಿಗ್ಗೆ ಬೆಂಗಳೂರು ತಲುಪಿತು – ಎಎನ್‌ಐ ಚಿತ್ರ   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ಸಂಜೆ ನಾಲ್ಕು ಗಂಟೆಗೆ ವಿಶ್ವಾಸಮತ ಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಬೆಳಿಗ್ಗೆ ಬೆಂಗಳೂರಿಗೆ ಕರೆ ತರಲಾಯಿತು.

ಖರೀದಿ’ ಭೀತಿಯಿಂದ ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿದ್ದ ಶಾಸಕರನ್ನು ಗುರುವಾರ ರಾತ್ರಿ ಹೈದರಾಬಾದ್‌ನ ತಾಜ್‌ ಕೃಷ್ಣಾ ಹೋಟೆಲ್‌ಗೆ ಕಾಂಗ್ರೆಸ್‌ ಸ್ಥಳಾಂತರಿಸಿತ್ತು. ಶಾಂಗ್ರಿಲಾ ಹೋಟೆಲ್‌ನಲ್ಲಿದ್ದ ತನ್ನ ಶಾಸಕರ ವಾಸ್ತವ್ಯವನ್ನೂ ಜೆಡಿಎಸ್‌ ಹೈದರಾಬಾದ್‌ಗೆ  ಬದಲಿಸಿತ್ತು. ಇದೀಗ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.

ಶಾಸಕರನ್ನು ಕರೆದುಕೊಂಡು ಬರುತ್ತಿರುವ ಬಸ್‌ಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶಾಸಕರು ನಗರದ ಪ್ರಮುಖ ಹೋಟೆಲ್ ಅಥವಾ ರೆಸಾರ್ಟ್‌ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದು, ಸುಮಾರು 11 ಗಂಟೆ ವೇಳೆಗೆ ವಿಧಾನಸಭೆಗೆ ಹಾಜರಾಗಲಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.