ADVERTISEMENT

ಸಮಾಜ ಒಡೆಯುವ ಹುನ್ನಾರ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:34 IST
Last Updated 8 ಫೆಬ್ರುವರಿ 2018, 9:34 IST

ಮೈಸೂರು: ‘ವೀರಶೈವ ಮತ್ತು ಲಿಂಗಾಯತ ಎಂಬ ಹೆಸರಿನಲ್ಲಿ ಬಹುಸಂಖ್ಯಾತವಾಗಿರುವ ಸಮಾಜವೊಂದನ್ನು ಅಲ್ಪಸಂಖ್ಯಾತರನ್ನಾಗಿ ಮಾಡಿ ತುಳಿಯುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಎಚ್ಚರದಿಂದ ಇರದಿದ್ದರೆ ನಾವು ಶಾಪಗ್ರಸ್ತರಾಗಬೇಕಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ತಿಳಿಸಿದರು.

ಸುತ್ತೂರಿನಲ್ಲಿ ನಡೆಯುತ್ತಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಮಾತನಾಡಿದರು.

ವೀರಶೈವ ಮತ್ತು ಲಿಂಗಾಯತ ಇಬ್ಬರನ್ನೂ ಒಂದೇ ವೇದಿಕೆಗೆ ಕರೆತಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸುತ್ತೂರು ಜಾತ್ರೆ ಮಾಡು
ತ್ತಿದ್ದಾರೆ. ಇದು ಪವಿತ್ರ ಕೆಲಸ. ಇಂತಹ ಕಾರ್ಯಕ್ಕೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.