ADVERTISEMENT

ವಜ್ಜಲ್‌, ಪಾಟೀಲಗೆ ಸ್ಪೀಕರ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:07 IST
Last Updated 8 ಫೆಬ್ರುವರಿ 2018, 9:07 IST

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲೇ ಬಿಜೆಪಿ ಸೇರಿದ ಇಬ್ಬರು ಜೆಡಿಎಸ್‌ ಶಾಸಕರಿಗೆ ಸೋಮವಾರ (ಜ. 22) ತಮ್ಮ ಮುಂದೆ ಖುದ್ದು ಹಾಜರಾಗುವಂತೆ ವಿಧಾನಸಭೆ ಕಾರ್ಯದರ್ಶಿ ಎಸ್‌. ಮೂರ್ತಿ ನೋಟಿಸ್‌ ನೀಡಿದ್ದಾರೆ.

ಲಿಂಗಸುಗೂರು ಕ್ಷೇತ್ರದ ಮಾನಪ್ಪ ವಜ್ಜಲ್‌ ಮತ್ತು ರಾಯಚೂರು ನಗರ ಕ್ಷೇತ್ರದ ಡಾ. ಶಿವರಾಜ ಪಾಟೀಲ ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸಭಾ ಅಧ್ಯಕ್ಷ ಕೆ.ಬಿ. ಕೋಳಿವಾಡ ಕಚೇರಿಗೆ ತೆರಳಿದ್ದರು. ಆದರೆ, ಅವರು ಇಲ್ಲದಿದ್ದುದರಿಂದ ವಿಧಾನಸಭಾ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದರು.

‘ಕಾನೂನು ಪ್ರಕಾರ ವಿಧಾನಸಭಾ ಅಧ್ಯಕ್ಷರಿಗೇ ರಾಜೀನಾಮೆ ಪತ್ರ ನೀಡಬೇಕು. ಹೀಗಾಗಿ, ಸೋಮವಾರ ಹಾಜರಾಗುವಂತೆ ಈ ಇಬ್ಬರು ಶಾಸಕರಿಗೂ ನೋಟಿಸ್‌ ನೀಡಲಾಗಿದೆ’ ಎಂದು ಮೂರ್ತಿ ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.