ADVERTISEMENT

ಬಜೆಟ್ ಅಧಿವೇಶನದ ನಂತರ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:03 IST
Last Updated 8 ಫೆಬ್ರುವರಿ 2018, 9:03 IST

ನಾಗಮಂಗಲ: ‘ಮುಂಬರುವ ಬಜೆಟ್ ಅಧಿವೇಶನದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್‌ ಸೇರುತ್ತೇನೆ’ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಇಲ್ಲಿ ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ ‘ಭಿನ್ನ ಶಾಸಕರೆಲ್ಲರೂ ಜನವರಿ ತಿಂಗಳ ಅಂತ್ಯಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆವು. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಬಜೆಟ್ ಅಧಿವೇಶನದ ನಂತರ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಅವರ ಸೂಚನೆಯಂತೆ ಬಜೆಟ್‌ ಅಧಿವೇಶನ ಮುಗಿದ ನಂತರ ರಾಜೀನಾಮೆ ನೀಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT