ADVERTISEMENT

ಜೆಡಿಎಸ್‌ ಶಾಸಕರ ರಾಜೀನಾಮೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:02 IST
Last Updated 8 ಫೆಬ್ರುವರಿ 2018, 9:02 IST

ಬೆಂಗಳೂರು: ಜೆಡಿಎಸ್‌ ಶಾಸಕರಾದ ಮಾನಪ್ಪ ವಜ್ಜಲ್ (ಲಿಂಗಸುಗೂರು) ಮತ್ತು ಡಾ. ಶಿವರಾಜ ಪಾಟೀಲ (ರಾಯಚೂರು ನಗರ) ಅವರು ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಮಂಗಳವಾರ ಅಂಗೀಕರಿಸಿದ್ದಾರೆ.

ರಾಜೀನಾಮೆ ಅಂಗೀಕಾರಗೊಳ್ಳುವ ಮೊದಲೇ ಈ ಇಬ್ಬರೂ ಶಾಸಕರು ಬಿಜೆಪಿ ಸೇರಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಕ್ರಮಕೈಗೊಳ್ಳುವಂತೆ ಜೆಡಿಎಸ್ ಮುಖಂಡರು ನೀಡಿದ್ದ ದೂರಿನ ವಿಚಾರಣೆಯನ್ನು ಕೋಳಿವಾಡ ಕಾಯ್ದಿರಿಸಿದ್ದಾರೆ.

ವಿಧಾನಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇವರು ವಿಧಾನಸಭಾ ಕಾರ್ಯದರ್ಶಿಗೆ ಇದೇ 18ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.