ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಬಿಸಿಯೂಟ ಕಾರ್ಯಕರ್ತೆಯರು ಗುರುವಾರ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ.
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಾರೆ. ಬೇಡಿಕೆಗೆ ಸರ್ಕಾರ ಸ್ಪಂದಿಸದೇ ಇರುವುದರಿಂದ ವಿಧಾನಸೌಧ ಚಲೋ ನಡೆಸಲಾಗುವುದು. ಹೀಗಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತವಾಗಲಿದೆ ಎಂದು ಸಿಐಟಿಯು ಅಧ್ಯಕ್ಷೆ ವರಲಕ್ಷ್ಮೀ ತಿಳಿಸಿದರು.
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ನಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದೂ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.