ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಮುಂದಾಗಿದ್ದಾರೆ. ಮೂರು ದಿನ ಬಿಡುವಿಲ್ಲದ ಕಾರ್ಯ
ಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಈ ಮೂಲಕ ಕರಾವಳಿಯಿಂದಲೇ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
18ರಿಂದ 20ರವರೆಗೆ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಮಾಡಲಿರುವ ಶಾ, ಶಕ್ತಿ ಕೇಂದ್ರಗಳ ಮುಖ್ಯಸ್ಥರು, ಹಿರಿಯ ಮುಖಂಡರು, ಮೀನುಗಾರಿಕೆ ಪ್ರಕೋಷ್ಠದ ನಾಯಕರ ಜತೆ ಸಭೆ ನಡೆಸಲಿದ್ದಾರೆ.
ಜತೆಗೆ, ಕಾಟಿಪಳ್ಳದಲ್ಲಿ ಹತ್ಯೆಯಾದ ದೀಪಕ್ ರಾವ್ ಮತ್ತು ಹೊನ್ನಾವರದ ಪರೇಶ್ ಮೇಸ್ತ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕಸರತ್ತು: ಅಮಿತ್ ಶಾ ಪ್ರವಾಸದ ಸಂದರ್ಭದಲ್ಲಿಯೇ ಕರಾವಳಿ ಭಾಗದ 19 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಸರತ್ತು ಆರಂಭವಾಗುವ ನಿರೀಕ್ಷೆ ಇದೆ.
ದೇವಾಲಯಗಳ ಭೇಟಿ: ಶಾ ಅವರು ಕುಕ್ಕೆ ಸುಬ್ರಹ್ಮಣ್ಯ, ಉಡುಪಿ ಶ್ರೀಕೃಷ್ಣ ಮಠ ಸೇರಿದಂತೆ ವಿವಿಧ ದೇವಾಲಯಗಳಿಗೂ ಭೇಟಿ ನೀಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.