ADVERTISEMENT

ಪಾದಯಾತ್ರೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:31 IST
Last Updated 8 ಫೆಬ್ರುವರಿ 2018, 19:31 IST

ನವದೆಹಲಿ: ಫೆಬ್ರುವರಿ ಅಂತ್ಯದ ವೇಳೆಗೆ ಕರಾವಳಿಯ ದಕ್ಷಿಣ ಕನ್ನಡ, ಕಾರವಾರ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಾದಯಾತ್ರೆ ಆಯೋಜಿಸುವ ಮೂಲಕ ಮತದಾರರ ಗಮನ ಸೆಳೆಯುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆ ಭಾಗದ ಸಂಸದರಿಗೆ ಸೂಚಿಸಿದ್ದಾರೆ.

ಗುರುವಾರ ಸಂಜೆ ರಾಜ್ಯದ ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದಿರುವ ಹಿಂದೂಗಳ ಹತ್ಯೆಯ ವಿಚಾರವನ್ನೇ ಮುಂದಾಗಿಸಿಕೊಂಡು ಜನರತ್ತ ತೆರಳುವಂತೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT