ADVERTISEMENT

ಮೋದಿಗೆ ಸಿದ್ದರಾಮಯ್ಯ ಸ್ವಾಗತ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:33 IST
Last Updated 18 ಫೆಬ್ರುವರಿ 2018, 19:33 IST
ಮೋದಿಗೆ ಸಿದ್ದರಾಮಯ್ಯ ಸ್ವಾಗತ
ಮೋದಿಗೆ ಸಿದ್ದರಾಮಯ್ಯ ಸ್ವಾಗತ   

ಮೈಸೂರು: ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭಾನುವಾರ ರಾತ್ರಿ 11 ಗಂಟೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು.

ಮೋದಿ ಅವರಿಗೆ ಸಿದ್ದರಾಮಯ್ಯ ಗುಲಾಬಿ ಹೂ ನೀಡಿ, ಶಾಲು ಹೊದಿಸಿ ಸ್ವಾಗತ ಕೋರಿದರು. ಆಗ ಇಬ್ಬರೂ ಪರಸ್ಪರ ನಗು ಬೀರುತ್ತಾ ಕೈಕುಲುಕಿದರು.

ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಪ್ರಕಾಶ್‌ ಜಾವಡೇಕರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ರಾಜ್ಯ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಡಿ.ರಂದೀಪ್‌ ಇದ್ದರು.

ADVERTISEMENT

ಮೋದಿ ಅವರು ವಿಶೇಷ ಭದ್ರತೆಯಲ್ಲಿ ಗಾಲ್ಫ್‌ ಕ್ಲಬ್‌ ಬಳಿ ಇರುವ ರ‍್ಯಾಡಿಸನ್‌ ಬ್ಲ್ಯೂ ಹೋಟೆಲಿಗೆ ತೆರಳಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿರುವ ಬಿಜೆಪಿ ಸಮಾವೇಶ, ರೈಲ್ವೆ ಯೋಜನೆಗಳ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.