ADVERTISEMENT

ಕುಕ್ಕೆ ದೇವರ ದರ್ಶನ ಪಡೆದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 4:56 IST
Last Updated 20 ಫೆಬ್ರುವರಿ 2018, 4:56 IST
ಕುಕ್ಕೆ ದೇವರ ದರ್ಶನ ಪಡೆದ ಅಮಿತ್ ಶಾ
ಕುಕ್ಕೆ ದೇವರ ದರ್ಶನ ಪಡೆದ ಅಮಿತ್ ಶಾ   

ಸುಬ್ರಹ್ಮಣ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಬೆಳಿಗ್ಗೆ ಕುಕ್ಕೆ ದೇವರ ದರ್ಶನ ಪಡೆದರು.

ಇದಾದ ಬಳಿಕ ವಿದ್ಯಾಪ್ರಸನ್ನ ಶ್ರೀಗಳನ್ನು ಅಮಿತ್ ಶಾ ಭೇಟಿ ಮಾಡಿದರು. ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ಮಾಡಿಸದೆ ಕೇವಲ ದರ್ಶನ ಪಡೆದರು. ವಿಶೇಷ ಪೂಜೆ ಮಾಡಿಸಿದರು.

ಅಮಿತ್ ಶಾ ಅನಾರೋಗ್ಯ ನಿಮಿತ್ತ ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮಗಳು ಸ್ವಲ್ಪ ವಿಳಂಬವಾಗಿವೆ.

ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಮಾವೇಶ ಮೂಲಕ ಅಮಿತ್ ಶಾ ಚುನಾವಣಾ ಪ್ರಚಾರಕ್ಕೆ ಇಲ್ಲಿ ಶಂಖನಾದ ಮೊಳಗಿಸುವರು.

ಶಾ ಅವರು ಸೋಮವಾರ ರಾತ್ರಿ 10ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಆದಿಶೇಷ ವಸತಿಗೃಹಕ್ಕೆ ಬಂದ ಅವರನ್ನು ಕೇರಳದ ಚೆಂಡೆ ವಾದನಗಳ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್, ಸಂಸದ ನಳಿನ್‍ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ದೇಗುಲದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೆರಾಲು ಸ್ವಾಗತಿಸಲಾಗಿತ್ತು. ಬಿಜೆಪಿ ನಾಯಕರು, ಕಾರ್ಯಕರ್ತರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.