ADVERTISEMENT

ಉಡುಪಿ–ಚಿಕ್ಕಮಗಳೂರಿಗೆ ಪ್ರಮೋದ್‌ ‘ಮೈತ್ರಿ’ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 20:26 IST
Last Updated 21 ಮಾರ್ಚ್ 2019, 20:26 IST
ಪ್ರಮೋದ್
ಪ್ರಮೋದ್   

ಬೆಂಗಳೂರು: ‌ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯುವುದು ಖಚಿತವಾಗಿದೆ.

‘ಜೆಡಿಎಸ್‌ ಚಿಹ್ನೆಯಲ್ಲಿ ಸ್ಪರ್ಧಿಸುವಂತೆ ಎಚ್‌.ಡಿ. ದೇವೇಗೌಡರು ಸೂಚನೆ ನೀಡಿದ್ದಾರೆ. ಪಕ್ಷದ ವರಿಷ್ಠರೂ ಸಮ್ಮತಿ ಸೂಚಿಸಿದ್ದಾರೆ’ ಎಂದು ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯವಿದೆ. ಆದರೆ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಭಾವ ಹೊಂದಿದೆ. ಈ ಕ್ಷೇತ್ರ ಜೆಡಿಎಸ್‌ಗೆ ಹಂಚಿಕೆಯಾಗಿದ್ದರೂ ಆ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಅವಕಾಶ ಪ್ರಮೋದ್ ಅವರಿಗೆ ಸಿಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.