ADVERTISEMENT

‘ಪ್ರಧಾನ ಪ್ರಚಾರ’ ಮಂತ್ರಿ

ಏಜೆನ್ಸೀಸ್
Published 8 ಫೆಬ್ರುವರಿ 2022, 1:26 IST
Last Updated 8 ಫೆಬ್ರುವರಿ 2022, 1:26 IST
   

ಲಖನೌ: ನರೇಂದ್ರ ಮೋದಿ ಅವರನ್ನು ‘ಪ್ರಧಾನ ಪ್ರಚಾರ ಮಂತ್ರಿ’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದರು.

ಉತ್ತರ ಪ್ರದೇಶದ ಬಾಂದಾದಲ್ಲಿ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಬರಗಾಲದಿಂದಾಗಿ ಜಿಲ್ಲೆಯ ಜನರು ತತ್ತರಿಸುತ್ತಿದ್ದಾರೆ. ಆದರೆ ಪ್ರಧಾನ ‘ಪ್ರಚಾರ’ ಮಂತ್ರಿ ಇಲ್ಲಿಗೆ ಬರುತ್ತಾರೆ ಎಂಬ ಕಾರಣಕ್ಕೆ ರಸ್ತೆಗಳಿಗೆ ನೀರು ಸುರಿದು ಶುಚಿಗೊಳಿಸಲಾಗುತ್ತಿದೆ. ದೆಹಲಿಯಿಂದ ಬರುತ್ತಿರುವುದು ‘ಚೌಕೀದಾರ’ನೇ ಅಥವಾ ಶೆಹನ್‌ಶಾಹನೇ’ ಎಂದು ಅವರು ಪ್ರಶ್ನಿಸಿದರು.

ಪ್ರಿಯಾಂಕಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಕಾಂಗ್ರೆಸ್‌ಗೆ ಸೋಲಿನ ಭಯ ಕಾಡುತ್ತಿದೆ ಎಂಬುದನ್ನು ಪ್ರಿಯಾಂಕಾ ಅವರ ಹೇಳಿಕೆಗಳು ಸ್ಪಷ್ಟಪಡಿಸುತ್ತಿವೆ’ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.