ADVERTISEMENT

ಖರ್ಗೆ ಎದುರು ಬಿಜೆ‍ಪಿಯಿಂದ ರತ್ನ‍ಪ್ರಭಾ?

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 20:25 IST
Last Updated 20 ಮಾರ್ಚ್ 2019, 20:25 IST
   

ಬೆಂಗಳೂರು: ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ.

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಉಮೇಶ ಜಾಧವ ನೀಡಿರುವ ರಾಜೀನಾಮೆಯನ್ನು ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್‌ ಅವರು ನಾಮಪತ್ರ ಸಲ್ಲಿಕೆ ದಿನದವರೆಗೂ ಅಂಗೀಕರಿಸದೇ ಇದ್ದರೆ ಪರ್ಯಾಯ ಅಭ್ಯರ್ಥಿಯಾಗಿ ರತ್ನಪ್ರಭಾ ಸ್ಪರ್ಧಿಸಲಿದ್ದಾರೆ.

ಪ್ರಮುಖರ ಸಮಿತಿಯ ಸದಸ್ಯರು ರತ್ನಪ್ರಭಾ ಜತೆ ಮಾತುಕತೆಯಾಡಿದ್ದು, ಖರ್ಗೆಯವರ ವಿರುದ್ಧ ಸ್ಪರ್ಧಿಸಲು ತಯಾರಾಗಿರುವಂತೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತ ಪಡಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.