ADVERTISEMENT

ಮಡಿಕೇರಿ: ಇಂದು ಸಂಜೆ ‘ಇಬ್ಬನಿ’ ರೆಸಾರ್ಟ್‌ಗೆ ಸಿಎಂ?

​ಪ್ರಜಾವಾಣಿ ವಾರ್ತೆ
Published 10 ಮೇ 2019, 8:35 IST
Last Updated 10 ಮೇ 2019, 8:35 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಮಡಿಕೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಡಿಕೇರಿ ಸಮೀಪದ ‘ಇಬ್ಬನಿ’ ರೆಸಾರ್ಟ್‌ಗೆ ಶುಕ್ರವಾರ ಸಂಜೆಯೇ ಆಗಮಿಸುವ ಸಾಧ್ಯತೆಯಿದೆ.

ರೆಸಾರ್ಟ್‌ನಲ್ಲಿ ಐದು ಐಷಾರಾಮಿ ಕೊಠಡಿಗಳನ್ನು ಬುಕ್‌ ಮಾಡಲಾಗಿದ್ದು, ಮುಖ್ಯಮಂತ್ರಿ ಜತೆಗೆ ಜೆಡಿಎಸ್‌ನ ಕೆಲವು ಸಚಿವರೂ ಬರುವ ಸಾಧ್ಯತೆಯಿದೆ. ಭಾನುವಾರ ಮಧ್ಯಾಹ್ನದ ನಂತರ ಮುಖ್ಯಮಂತ್ರಿ ಇಲ್ಲಿಂದ ವಾಪಸ್‌ ತೆರಳಲಿದ್ದಾರೆ.

ಕೆಲವೇ ದಿನಗಳ ಹಿಂದೆಯಷ್ಟೇ ಇದೇ ರೆಸಾರ್ಟ್‌ನಲ್ಲಿ ‘ಮೈತ್ರಿ’ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಅವರ ಪುತ್ರ, ಶಾಸಕ ಯತೀಂದ್ರ ಎರಡು ದಿನ ವಾಸ್ತವ್ಯ ಹೂಡಿದ್ದರು. ಬಳಿಕ ರಾಜ್ಯದಲ್ಲಿ ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲೇ’ ಎಂಬ ಕೂಗು ಕಾಂಗ್ರೆಸ್‌ ಶಾಸಕರ ವಲಯದಿಂದ ಕೇಳಿಬಂದಿತ್ತು. ಈಗ ಅದೇ ರೆಸಾರ್ಟ್‌ನಲ್ಲಿ ಮುಖ್ಯಮಂತ್ರಿಯ ವಿಶ್ರಾಂತಿ ಕುತೂಹಲ ಮೂಡಿಸಿದೆ.

ADVERTISEMENT

‘ಇಬ್ಬನಿ’, ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ಗಳಲ್ಲಿ ಒಂದಾಗಿದೆ. ಮಡಿಕೇರಿ– ಮೈಸೂರು ಹೆದ್ದಾರಿ ಬದಿಯ ಕಾಫಿ ತೋಟದ ಮಧ್ಯದಲ್ಲಿರುವ ರೆಸಾರ್ಟ್‌ನಲ್ಲಿ ಐಷಾರಾಮಿ ಸೌಲಭ್ಯಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.