ನವದೆಹಲಿ: ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ವಿದೇಶಕ್ಕೆ ತೆರಳಲುದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲುಅನುಮತಿ ನೀಡುವಂತೆ ತರೂರ್ ಕೋರಿದ್ದರು. ವಿಶೇಷ ನ್ಯಾಯಾಧೀಶ ಅರುಣ್ ಭಾರಧ್ವಜ್ ಅರ್ಜಿ ವಿಚಾರಣೆ ನಡೆಸಿದರು.
ಮೇ 5ರಿಂದ 20ರವರೆಗೆ ಅಮೆರಿಕಕ್ಕೆ ತೆರಳಲು ತರೂರ್ಗೆ ಅನುಮತಿ ದೊರಕಿದೆ.
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನುಮತಿ ಇಲ್ಲದೇ ಶಶಿ ತರೂರ್ ದೇಶ ಬಿಟ್ಟು ಹೋಗುವಂತಿಲ್ಲ ಎಂದು ಆದೇಶಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.