ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಏ.9ರಂದು ತಂದಿದ್ದ ಬಾಕ್ಸ್ ಭದ್ರತಾ ಸಿಬ್ಬಂದಿಯ ಸಲಕರಣೆಗಳಿಗೆ ಸಂಬಂಧಿಸಿದ್ದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಸ್ಪಷ್ಟನೆ ನೀಡಿದ್ದಾರೆ.
ಪೆಟ್ಟಿಗೆಯಲ್ಲಿ ಭದ್ರತಾ ಸಿಬ್ಬಂದಿಯ ಸಲಕರಣೆ ಇದ್ದವು. ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
* ಇದನ್ನೂ ಓದಿ:ಅನುಮಾನ ಹುಟ್ಟಿಸಿದೆ ಚಿತ್ರದುರ್ಗಕ್ಕೆ ಮೋದಿ ತಂದ ಸೂಟ್ಕೇಸ್
ಬಿಜೆಪಿ ಸಮಾವೇಶಕ್ಕೆ ಮೋದಿ ಅವರನ್ನು ಹೊತ್ತು ತಂದಿದ್ದ ಹೆಲಿಕಾಪ್ಟರ್ನಿಂದ ಭದ್ರತಾ ಸಿಬ್ಬಂದಿ ಸೂಟ್ ಕೇಸ್ವೊಂದನ್ನು ಸಾಗಿಸುತ್ತಿರುವ ವಿಡಿಯೊ ಸದ್ಯ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ವಾಹಿನಿಗಳಲ್ಲಿ ಚರ್ಚೆ ಆರಂಭವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.