ADVERTISEMENT

‘ನಿಮ್ಮಿಂದ ಆಗುವುದಿಲ್ಲ ಬಿಡಿ’

ಏಜೆನ್ಸೀಸ್
Published 24 ಏಪ್ರಿಲ್ 2019, 20:31 IST
Last Updated 24 ಏಪ್ರಿಲ್ 2019, 20:31 IST
   

ನವದೆಹಲಿ (ಪಿಟಿಐ): ಮಾಧ್ಯಮಗೋಷ್ಠಿಯನ್ನು ಎದುರಿಸುವುದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ವಾರಾಣಸಿಯಲ್ಲಿ ಮೋದಿ ಅವರು ಇದೇ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಅವರು ಮಾಧ್ಯಮಗೋಷ್ಠಿ ನಡೆಸಲಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸುದ್ದಿ ವೈರಲ್ ಸಹ ಆಗಿತ್ತು. ಆದರೆ ಅದರ ಬೆನ್ನಲ್ಲೇ ಬಿಜೆಪಿಯು ಈ ಸಂಬಂಧ ಸ್ಪಷ್ಟನೆ ನೀಡಿತು.

‘ಪ್ರಧಾನಿ ಮೋದಿ ಅವರು ಇದೇ 25 ಮತ್ತು 26ರಂದು ವಾರಾಣಸಿಯಲ್ಲಿ ಇರಲಿದ್ದಾರೆ. ಎರಡೂ ದಿನ ಕ್ಷೇತ್ರದ ಹಲವೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಆದರೆ ಯಾವುದೇ ಮಾಧ್ಯಮಗೋಷ್ಠಿಯಲ್ಲಿ ಮೋದಿ ಪಾಲ್ಗೊಳ್ಳುವುದಿಲ್ಲ’ ಎಂದು ಬಿಜೆಪಿ ಮಾಹಿತಿ ನೀಡಿತು. ಇದರ ಬೆನ್ನಲ್ಲೇ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.