ADVERTISEMENT

ಮೋರೆ ಭೇಟಿ ಮಾಡಿದ ವಿನಯ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 11:45 IST
Last Updated 5 ಏಪ್ರಿಲ್ 2019, 11:45 IST
ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಎಸ್.ಆರ್.ಮೋರೆ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ವಿನಯ ಕುಲಕರ್ಣಿ ಅವರನ್ನು ಸನ್ಮಾನಿಸಿದರು
ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಎಸ್.ಆರ್.ಮೋರೆ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ವಿನಯ ಕುಲಕರ್ಣಿ ಅವರನ್ನು ಸನ್ಮಾನಿಸಿದರು   

ಧಾರವಾಡ: ಲೋಕಸಭಾ ಚುನಾವಣೆಯ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರು ಹಿರಿಯ ಕಾಂಗ್ರೆಸ್ ಮುಖಂಡ ಎಸ್‌.ಆರ್.ಮೋರೆ ಅವರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಬೆಂಬಲ ಕೋರಿದರು.

ತಮ್ಮ ಬೆಂಬಲಿಗರೊಂದಿಗೆ ಮೋರೆ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ವಿನಯ ಕುಲಕರ್ಣಿ, ಶಾಲು ಹೊದಿಸಿ, ಹಾರ ಹಾಕಿ ಮೋರೆ ಅವರನ್ನು ಸನ್ಮಾನಿಸಿದರು.

ಈ ಬಾರಿ ಚುನಾವಣೆಯಲ್ಲಿ ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮೋರೆ ಅವರು ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಭರವಸೆ ನೀಡಿದರು. ಜತೆಗೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳುವುದಾಗಿಯೂ ತಿಳಿಸಿದರು ಎಂದು ಮೂಲಗಳು ಹೇಳಿವೆ.

ADVERTISEMENT

‘ಕಾಂಗ್ರೆಸ್‌ ಪಕ್ಷದವರಾಗಿರುವ ನಾವೆಲ್ಲರೂ ಒಂದು. ನಮ್ಮೊಳಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಚುನಾವಣೆಯಲ್ಲಿ ಅವು ಯಾವುವೂ ಅಡ್ಡ ಬಾರದು. ಈ ಬಾರಿ ಕ್ಷೇತ್ರವನ್ನು ಮರಳಿ ಪಡೆಯಲು ಒಗ್ಗಟ್ಟಿನಿಂದ ಹೋರಾಟ ಅಗತ್ಯ ಎಂದು ಮೋರೆ ಹೇಳಿದರು ಎಂದು ಮೋರೆ ಬೆಂಬಲಿಗರು ತಿಳಿಸಿದರು.

ಈ ಸಂದರ್ಭದಲ್ಲಿ ಮರಾಠಾ ಸಮಾಜದ ‌ರಾಜೀವ ಕಾಳೆ, ಎಸ್.ಎ.ಪವಾರ್, ನೀರಲಕಟ್ಟಿ, ರಾಜು ದವಳೆ, ಘಾಟ್ಕೆ, ತಾನಾಜಿರಾವ್ ಪುಂಡೆ, ಬಸವರಾಜ ಜಾಧವ ಮತ್ತು ಹೊಟೆಲ್ ಉದ್ಯಮಿಗಳಾದಮಹೇಶ ಶೆಟ್ಟಿ, ಜೀವನ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.