ADVERTISEMENT

ವೈಎಸ್‌ಆರ್‌ಗೆ ಮತ ಹಾಕಿದರೆ, ನೀವೇ ಮರಣಶಾಸನ ಬರೆದು ಕೊಂಡಂತೆ:  ನಾಯ್ಡು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2019, 5:42 IST
Last Updated 23 ಮಾರ್ಚ್ 2019, 5:42 IST
   

ವಿಶಾಖಪಟ್ಟಣ: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದರೆ, ನಿಮಗೆ ನೀವೇ ಮರಣಶಾಸನ ಬರೆದು ಕೊಂಡಂತೆಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಇಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಜಗನ್‌ ರೆಡ್ಡಿ ರಾಜ್ಯದ ಜನರ ಹಣವನ್ನು ಲೂಟಿ ಮಾಡಿದ್ದಾರೆ, ಅವರಿಗೆ ಮತ ಹಾಕಿದರೆ ನಿಮಗೆ ನೀವೇ ಮರಣಶಾಸನ ಬರೆದು ಕೊಂಡಂತೆಎಂದು ಅವರು ತಿಳಿಸಿದರು. ವಿಧಾನಸಭಾ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಡಿಪಿಯನ್ನು ಬೆಂಬಲಿಸಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಈ ರಾಜ್ಯದ ಪ್ರತಿ ಕುಟುಂಬಕ್ಕೂ ನಾನು ಹಿರಿಯ ಮಗನಿದ್ದಂತೆ, 98 ಲಕ್ಷ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡಿದ್ದೇನೆ, ಹಿರಿಯ ನಾಗರಿಕರಿಗೆ ಮಾಸಿಕ ₹2000 ಪಿಂಚಣಿ ನೀಡಲಾಗುತ್ತಿದೆ, ಗೋದಾವರಿ ನದಿ ನೀರನ್ನು ವಿಶಾಖಪಟ್ಟಣದವರೆಗೂ ತರಲಾಗಿದೆ, ಉತ್ತರ ಆಂಧ್ರಪ್ರದೇಶದ ಸುಜಲಾ ಶ್ರವಂತಿ ನೀರಾವರಿ ಯೋಜನೆ ಈ ವರ್ಷಾಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.

ADVERTISEMENT

ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರ ಕೈವಾಡ ಇರಬಹುದು ಎಂದು ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.