ಬೆಂಗಳೂರು: ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಕಾಲಾ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಹೇರಿರುವ ನಿಷೇಧ ತೆರವುಗೊಳಿಸುವಂತೆ ರಾಷ್ಟ್ರೀಯ ಸಿನಿಮಾ ಮಂಡಳಿಯು ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿಗೆ(ಎಸ್ಐಎಫ್ಸಿಸಿ) ಸೋಮವಾರ ಒತ್ತಾಯಿಸಿದೆ.
ಕಾವೇರಿ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ್ದರಿಂದ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಕಾಲಾ’ ಚಿತ್ರ ರಾಜ್ಯದಲ್ಲಿ ತೆರೆ ಕಾಣಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಮಂಗಳವಾರ ತಿಳಿಸಿದ್ದರು. ಜತೆಗೆ, ವಿವಿಧ ಕನ್ನಡಪರ ಸಂಘಟನೆಗಳು ಚಿತ್ರ ಬಿಡುಗಡೆ ಮಾಡದಂತೆ ಆಗ್ರಹಿಸಿದ್ದವು.
ಜೂನ್ 7ರಂದು ಬಿಡುಗಡೆಯಾಗಲಿರುವ ಕಾಲಾ ಚಿತ್ರದ ಪ್ರದರ್ಶನಕ್ಕೆ ರಾಜ್ಯದಲ್ಲಿ ಅನುಮತಿಸಿಸಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿತ್ತು.
ಕಾವೇರಿ ನೀರು ಹಂಚಿಕೆ ಕುರಿತಂತೆ 67 ವರ್ಷ ವಯಸ್ಸಿನ ನಟ ರಜನಿಕಾಂತ್ ಕನ್ನಡ ಪರ ಸಂಘಟನೆಗಳಿಂದ ವಿರೋಧ ಎದುರಿಸುತ್ತಿದ್ದಾರೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜತೆ ಮಾತುಕತೆ ನಡೆಸಲು ಎಸ್ಐಎಫ್ಸಿಸಿಗೆ ಮನವಿ ಮಾಡಲಾಗಿದೆ ಎಂದು ಭಾರತೀಯ ಸಿನಿಮಾ ಮಂಡಳಿ ಅಧ್ಯಕ್ಷ ಸಾಕ್ಷಿ ಮೆಹ್ರಾ ತಿಳಿಸಿದ್ದಾರೆ.
* ಇದನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.