ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾದ ಬಗ್ಗೆ ರೈಲ್ವೆ ಸಚಿವ ಸುರೇಶ ಪ್ರಭು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅಕ್ಷಯ್ ಕುಮಾರ್ ಅವರು ಈ ಹೊಸ ಚಿತ್ರದ ಮೂಲಕ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಪ್ರಶಂಸನೀಯ ಎಂದು ಸುರೇಶ ಪ್ರಭು ಹೇಳಿದ್ದಾರೆ.
ಅಕ್ಷಯ್ ಕುಮಾರ್ ಜೊತೆಗಿರುವ ಕೆಲ ಪೋಟೊಗಳನ್ನು ಸುರೇಶ್ ಪ್ರಭು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಅಕ್ಷಯ್ ಕುಮಾರ್ ಸಚಿವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಅವಕಾಶ ಪಡೆದಿದ್ದ ಅಕ್ಷಯ್ ಕುಮಾರ್ ಚಿತ್ರದ ಕುರಿತು ಅವರೊಂದಿಗೆ ಚರ್ಚಿಸಿದ್ದರು .
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.