ಸೋಮಶೇಖರ್ ನಿರ್ಮಿಸುತ್ತಿರುವ `ತುಂತುರು~ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ರಮೇಶ್ಅರವಿಂದ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ದೇವನಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಅನುಪ್ರಭಾಕರ್, ಸಾಧುಕೋಕಿಲಾ, ಸೋಮು, ರಿಷಿಕಾ ಸಿಂಗ್, ಅನಿಲ್ ಗೌಡ, ನವೀನ್ ತಾರಾಬಳಗದಲ್ಲಿದ್ದಾರೆ. ಮಹೇಶ್ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಶ್ರಿಧರ್ ವಿ ಸಂಭ್ರಮ್ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ, ಗಣೇಶ್ ನೃತ್ಯ ನಿರ್ದೇಶನ, ರೇವಣ್ಣ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.