ADVERTISEMENT

ಮಾತು ಮುಗಿಸಿದ ‘ಪ್ರೀತಿ ಗೀತಿ ಇತ್ಯಾದಿ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:30 IST
Last Updated 5 ಡಿಸೆಂಬರ್ 2013, 19:30 IST

ಯೋಗರಾಜ್‌ ಭಟ್ಟರ ಗರಡಿಯಲ್ಲಿ ಬೆಳೆದ ವೀರೇಂದ್ರ ನಿರ್ದೇಶನದ ಮೊದಲ ಚಿತ್ರ ‘ಪ್ರೀತಿ ಗೀತಿ ಇತ್ಯಾದಿ’ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ.

ನಿರ್ದೇಶಕ ಪವನ್‌ ಒಡೆಯರ್‌ ನಾಯಕರಾಗಿ ನಟಿಸಿರುವ ಚಿತ್ರವಿದು. ಸಂಗೀತಾ ಭಟ್‌ ಅವರಿಗೆ ನಾಯಕಿ. ಬೆಂಗಳೂರು, ಮೈಸೂರು, ತೀರ್ಥಹಳ್ಳಿ ಮುಂತಾದೆಡೆ ಚಿತ್ರೀಕರಣ ನಡೆಸಲಾಗಿದೆ. ವಿಜಯಕುಮಾರ್ ಈ ಚಿತ್ರದ ನಿರ್ಮಾಪಕರು.

ವೀರ ಸಮರ್ಥ ಸಂಗೀತ ನೀಡಿದ್ದಾರೆ. ಭಾಸ್ಕರ್ ರೆಡ್ಡಿ ಛಾಯಾಗ್ರಹಣ ಚಿತ್ರಕ್ಕಿದೆ. ರಂಗಾಯಣ ರಘು, ವಿನಯಾ ಪ್ರಕಾಶ್, ಇತರರು ತಾರಾಗಣದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.