ಬೆಂಗಳೂರು: ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಸಂಸದೆ ಹಾಗೂ ನಟಿ ರಮ್ಯಾ ಅವರು 2019ರ ಲೋಕಸಭಾ ಚುನಾವಣೆ ಬಳಿಕ ಚಿತ್ರರಂಗಕ್ಕೆ ಮರಳುವ ಸೂಚನೆಯನ್ನು ನೀಡಿದ್ದಾರೆ.
ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿರುವ ರಮ್ಯಾ, ನಟ ರಕ್ಷಿತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡುವ ಸಂದರ್ಭದಲ್ಲಿ ಚಿತ್ರರಂಗಕ್ಕೆ ಮರಳುವ ಕುರಿತು ಮಾತನಾಡಿದ್ದಾರೆ.
ಜೂನ್ 7ರಂದು ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ವೀಕ್ಷಿಸಿದ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿ ಟ್ವಿಟರ್ನಲ್ಲಿ ರಕ್ಷಿತ್ಗೆ ಟ್ಯಾಗ್ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.