ಚೆನ್ನೈ: ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ ಖ್ಯಾತಿ ಮತ್ತು ಹಣದಿಂದ ಮಾತ್ರವೇ ರಾಜಕೀಯದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಇದಕ್ಕಿಂತ ಹೊರತಾದ ಯಾವುದೋ ವಿಶೇಷ ಅಂಶ ಬೇಕಾಗಿದೆ ಎಂದು ತಮಿಳು ನಟ ರಜನಿಕಾಂತ್ ಹೇಳಿದರು.
ತಮಿಳು ನಟ ಶಿವಾಜಿ ಗಣೇಶನ್ ಅವರ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ನಟ ಕಮಲಹಾಸನ್ ಜತೆ ವೇದಿಕೆ ಹಂಚಿಕೊಂಡ ಅವರು, ‘ಸಾರ್ವಜನಿಕ ಜೀವನದಲ್ಲಿ ಯಶಸ್ಸು ಗಳಿಸಲು ಬೇಕಿರುವ ವಿಶೇಷ ಅಂಶ ಏನೆಂಬುದು ಕಮಲಹಾಸನ್ ಅವರಿಗೆ ತಿಳಿದಿರುವ ಸಾಧ್ಯತೆ ಇದೆ. ಆದರೆ, ಅದನ್ನವರು ನನ್ನ ಜತೆ ಹಂಚಿಕೊಳ್ಳಲು ಸಿದ್ಧರಿಲ್ಲ’ ಎಂದು ಹಾಸ್ಯ ಮಾಡಿದರು.
‘ಸಿನಿಮಾ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದ ಶಿವಾಜಿ ಗಣೇಶನ್ ಅವರು ತಮ್ಮದೇ ಆದ ಪಕ್ಷ ಸ್ಥಾಪಿಸಿದ್ದರು. ಆದರೆ, ತಮ್ಮದೇ ಕ್ಷೇತ್ರದಲ್ಲಿ ಸೋಲನುಭವಿಸಿದ್ದರು’ ಎಂದು ರಜನಿ ನೆನಪಿಸಿದರು. ಸಮಾರಂಭದಲ್ಲಿ ತಮಿಳುನಾಡಿನ ಉಪಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.