ADVERTISEMENT

‘ಅಬತರ’ ತುಳು ಸಿನಿಮಾ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 5:09 IST
Last Updated 19 ಆಗಸ್ಟ್ 2022, 5:09 IST
‘ಅಬತರ’ ತುಳು ಸಿನಿಮಾ ಬಿಡುಗಡೆ ಕಾರ್ಯಕ್ರಮದಲ್ಲಿ ಐವನ್ ಡಿಸೋಜ, ಇತರರು ಭಾಗವಹಿಸಿದ್ದರು.
‘ಅಬತರ’ ತುಳು ಸಿನಿಮಾ ಬಿಡುಗಡೆ ಕಾರ್ಯಕ್ರಮದಲ್ಲಿ ಐವನ್ ಡಿಸೋಜ, ಇತರರು ಭಾಗವಹಿಸಿದ್ದರು.   

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ಅಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ‘ಅಬತರ’ ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್‌ನಲ್ಲಿ ಬಿಡುಗಡೆಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ಮಾತನಾಡಿ, ‘ತುಳು ರಂಗಭೂಮಿ ಬಹಳಷ್ಟು ಬೆಳೆದಿದೆ. ರಂಗಭೂಮಿಯ ಕಲಾವಿದರು ಅಭಿನಯಿಸುವ ತುಳು ಚಿತ್ರಗಳು ಪ್ರಸಿದ್ಧಿ ಪಡೆಯುತ್ತಿವೆ. ತುಳು ಸಿನಿಮಾಗಳ ಪರ್ವಕಾಲ ಇದಾಗಿದೆ’ ಎಂದರು.

ದೇವದಾಸ್ ಕಾಪಿಕಾಡ್ ಮಾತನಾಡಿ, ‘ಈವರೆಗೆ ನಾವು ಮಾತಾಡಿದ್ದೇವೆ ಇನ್ನು ಮುಂದೆ ತುಳುವರು ನಮ್ಮ ಬಗ್ಗೆ ಸಿನಿಮಾ ಮಾತಾಡಬೇಕು’ ಎಂದರು.

ADVERTISEMENT

ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್ ಚಿತ್ರದ ಬಗ್ಗೆ ಮಾತಾಡಿದರು. ಲಕ್ಷ್ಮೀಶ್ ಭಂಡಾರಿ, ಕಾರ್ಪೋರೇಟರ್ ಕಿರಣ್ ಕೋಡಿಕಲ್, ಕಿಶೋರ್ ಕೊಟ್ಟಾರಿ, ರಾಕೇಶ್, ಸಾಯಿಕೃಷ್ಣ, ಆರ್ ಧನರಾಜ್, ಪ್ರಮೋದ್ ಬಲ್ಲಾಳ್ ಬಾಗ್, ಸುರೇಶ್ಚಂದ್ರ ಶೆಟ್ಟಿ, ಶೇಖರ ಶೆಟ್ಟಿ, ಅನಿಲ್ ಸಾಲಿಯಾನ್, ನಿಖಿಲ್ ಸಾಲ್ಯಾನ್, ವೀರಾಜ್ ಅತ್ತಾವರ, ಆನಂದ್ ಬಂಗೇರ, ದಿನೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸುರೇಂದ್ರ ಬಂಗೇರ, ರಕ್ಷಿತ್ ಕೊಟ್ಟಾರಿ, ಗಿರೀಶ್ ಎಂ ಶೆಟ್ಟಿ ಕಟೀಲು , ಪ್ರಕಾಶ್ ಶೆಟ್ಟಿ ಧರ್ಮನಗರ, ಮೋಹನ್ ಕೊಪ್ಪಳ, ಜಗನ್ನಾಥ ಶೆಟ್ಟಿ ಬಾಳ, ಅರ್ಜುನ್ ಕಾಪಿಕಾಡ್, ಶರ್ಮಿಳಾ ಡಿ ಕಾಪಿಕಾಡ್, ಗಾನ ಭಟ್ ಅನೂಪ್ ಸಾಗರ್, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು. ಲಕ್ಷ್ಮೀಶ್ ಮಂಗಳೂರು ನಲ್ಲಿ ನಿರೂಪಿಸಿದರು. ಒಟ್ಟು 15 ಚಿತ್ರ ಮಂದಿರಗಳಲ್ಲಿ ಸಿನಿಮಾ ಏಕಕಾಲಕ್ಕೆ ತೆರೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.