ADVERTISEMENT

ರಸ್ತೆ ಅಪಘಾತ: ಬಾಲಿವುಡ್‌ ಸ್ಟಂಟ್‌ ಮಾಸ್ಟರ್‌ ಸಾವು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 20:17 IST
Last Updated 16 ಅಕ್ಟೋಬರ್ 2018, 20:17 IST
ಹುಣಸೂರು ತಾಲ್ಲೂಕಿನ ಯಶೋದಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಜಖಂಗೊಂಡ ಕಾರು
ಹುಣಸೂರು ತಾಲ್ಲೂಕಿನ ಯಶೋದಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಜಖಂಗೊಂಡ ಕಾರು   

ಹುಣಸೂರು: ತಾಲ್ಲೂಕಿನ ಯಶೋದಾಪುರ ಗ್ರಾಮದ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್‌ ಸ್ಟಂಟ್‌ ಮಾಸ್ಟರ್‌ ಸತ್ತರ್‌ ಅಹಮದ್‌ ಖಾನ್‌ (33) ಮೃತಪಟ್ಟಿದ್ದಾರೆ.

ಕಾರಿನ ಚಾಲಕ, ಬೆಂಗಳೂರಿನ ಉಮೇಶ್‌ ಮತ್ತು ಅರುಣ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಿವುಡ್‌ ಚಿತ್ರತಂಡವೊಂದು ‘ಉತ್ಕರ್ಷ’ ಎಂಬ ಸಿನಿಮಾ ಚಿತ್ರೀಕರಣಕ್ಕಾಗಿ ಬೆಂಗಳೂರಿನಿಂದ ಮಡಿಕೇರಿಗೆ ಹೋಗುತ್ತಿತ್ತು. ಈ ವೇಳೆ ಯಶೋದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡುಹಂದಿ ಅಡ್ಡಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಆದರೆ, ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸತ್ತರ್‌ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್‌ ಪೂವಯ್ಯ ತಿಳಿಸಿದ್ದಾರೆ.

ADVERTISEMENT

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.