ತೆಲುಗು ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನೀರಸ ಪ್ರದರ್ಶನ ತೋರಿದೆ.
ಆಚಾರ್ಯ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರವಾಗಿತ್ತು. ಸಿನಿಮಾ ಮೇಕಿಂಗ್ ಸರಿ ಇಲ್ಲ ಎಂಬ ಕಾರಣಕ್ಕೆ ಪ್ರೇಕ್ಷಕರು ಸಿನಿಮಾದಿಂದ ದೂರ ಸರಿಯುತ್ತಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಮೊದಲ ವಾರಂತ್ಯದಲ್ಲಿ ಕೇವಲ ₹73 ಕೋಟಿ ಕಲೆಕ್ಷನ್ ಮಾಡಿದೆ. ಇದರಿಂದ ಚಿರಂಜೀವಿ ಮತ್ತು ರಾಮ್ ಚರಣ್ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.
ಕೆಜಿಎಫ್–2, ಆರ್ಆರ್ಆರ್ ಸಿನಿಮಾಗಳ ಅಬ್ಬರದ ನಡುವೆ ‘ಆಚಾರ್ಯ‘ ಸಂಪೂರ್ಣವಾಗಿ ನೆಲ ಕಚ್ಚಿದೆ ಎಂದು ಆಂಧ್ರ ಬಾಕ್ಸ್ ಆಫೀಸ್ ವರದಿ ಮಾಡಿದೆ.
ಕೊರಟಾಲ ಶಿವ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.