ADVERTISEMENT

ನಿರ್ದೇಶಕ ನಿಶಿಕಾಂತ್ ಕಾಮತ್‌ ಬದುಕಿದ್ದಾರೆ: ನಟ ರಿತೇಶ್ ದೇಶ್‌ಮುಖ್ ಟ್ವೀಟ್

ಏಜೆನ್ಸೀಸ್
Published 17 ಆಗಸ್ಟ್ 2020, 9:19 IST
Last Updated 17 ಆಗಸ್ಟ್ 2020, 9:19 IST
ನಿರ್ದೇಶಕ ನಿಶಿಕಾಂತ್
ನಿರ್ದೇಶಕ ನಿಶಿಕಾಂತ್   

ಮುಂಬೈ: ಬಾಲಿವುಡ್‌ನ ‘ದೃಶ್ಯಂ’ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನರಾಗಿಲ್ಲ ಎಂದು ನಟ ರಿತೇಶ್ ದೇಶ್‌ಮುಖ್ ಟ್ವೀಟಿಸಿದ್ದಾರೆ.

ನಿಶಿಕಾಂತ್ ಕಾಮತ್ ಅವರಿಗೆ ವೆಂಟಿಲೇಟರ್ ನೆರವು ನೀಡಲಾಗಿದೆ. ಅವರು ಬದುಕಿದ್ದಾರೆ ಮತ್ತು ಹೋರಾಡುತ್ತಿದ್ದಾರೆ. ಅವರಿಗಾಗಿ ಪ್ರಾರ್ಥಿಸೋಣ ಎಂದಿದ್ದಾರೆ ರಿತೇಶ್.

ನಿಶಿಕಾಂತ್ ಅವರು ನಿಧನರಾಗಿಲ್ಲ. ಅವರು ಬದುಕಿದ್ದಾರೆ. ವೆಂಟಿಲೇಟರ್ ಸಹಾಯ ನೀಡಲಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ. ( ವರದಿಗಾರರಿಂದಖಚಿತ ಪಡಿಸಿಕೊಳ್ಳುವ ಮುನ್ನವೇಸುದ್ದಿಗಳನ್ನು ಮೊದಲು ಅಪ್‍ಲೋಡ್ ಮಾಡುವ ಹಪಾಹಪಿ ಇದು ಎಂದು ದೀಪಾಂಜನ ಎಂಬವರು ಟ್ವೀಟಿಸಿದ್ದಾರೆ.

ADVERTISEMENT

2005ರಲ್ಲಿ ಮರಾಠಿಯ ‘ದೊಂಬಿವಾಲಿ ಫಾಸ್ಟ್‌’ ಸಿನಿಮಾದ ಮೂಲಕ ನಿಶಿಕಾಂತ್ ನಿರ್ದೇಶನದ ಹಾದಿ ಹಿಡಿದಿದ್ದರು. ಈ ಸಿನಿಮಾ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿತ್ತು.

2004ರ ‘ಹವಾ ಆನೇದೇ’ ಇವರ ನಟನೆಯ ಚೊಚ್ಚಲ ಸಿನಿಮಾ. 2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ–ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್‌’, ‘ಮುಂಬೈ ಮೇರಿ ಜಾನ್‌’, ‘ರಾಕಿ ಹ್ಯಾಂಡ್‌ಸಮ್‌’, ‘ಫೋರ್ಸ್‌’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

‘ಡ್ಯಾಡಿ’, ‘ರಾಕಿ ಹ್ಯಾಂಡ್‌ಸಮ್‌’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್‌ ಸರಣಿಗಳನ್ನು ನಿರ್ಮಾಣ ಮಾಡಿದ್ದರು. ’ದಿ ಫೈನಲ್ ಕಾಲ್’ ಹಾಗೂ ’ರಂಗ್‌ಬಾಝ್ ಫಿರ್‌ಸೇ’ ಇವರು ನಿರ್ಮಾಣ ಮಾಡಿದ ವೆಬ್‌ಸರಣಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.