ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಅವರು ಟ್ವೀಟ್ ಮಾಡಿ, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದ್ದಾರೆ.
ಜಗ್ಗೇಶ್ ಅವರು ತುಮಕೂರು ಜಿಲ್ಲೆಯಮಾಯಸಂದ್ರದವರು. ಇಲ್ಲಿರುವ ಅವರ ಮನೆಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಹಾಗೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಗಮನ ಹರಿಸುವಂತೆ ಅವರು ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, 'ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ.. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆ ಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಲು ವಿನಂತಿ..' ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಟ್ಯಾಗ್ ಮಾಡಿದ್ದಾರೆ.
ಜಗ್ಗೇಶ್ ಅವರು ರಾಜ್ಯಸಭೆಗೆ ನೇಮಕವಾಗಿದ್ದಾರೆ. ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿಯೂ ಅವರು ಸದನದ ಗಮನ ಸೆಳೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.