ADVERTISEMENT

ಸರ್ಕಾರಿ ಗೌರವಗಳೊಂದಿಗೆ ನಟ ಶಿವರಾಂ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 10:07 IST
Last Updated 5 ಡಿಸೆಂಬರ್ 2021, 10:07 IST
ಶಿವರಾಂ ಪುತ್ರರಾದ ರವಿಶಂಕರ ಹಾಗೂ ಲಕ್ಷ್ಮೀಶ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು, ಪ್ರಜಾವಾಣಿ ಚಿತ್ರ
ಶಿವರಾಂ ಪುತ್ರರಾದ ರವಿಶಂಕರ ಹಾಗೂ ಲಕ್ಷ್ಮೀಶ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು, ಪ್ರಜಾವಾಣಿ ಚಿತ್ರ   

ಬೆಂಗಳೂರು: ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ (83) ಅವರ ಅಂತ್ಯಕ್ರಿಯೆಸರ್ಕಾರಿ ಗೌರವಗಳೊಂದಿಗೆ ನಗರದ ಬನಶಂಕರಿ ಚಿತಾಗಾರದಲ್ಲಿ ಭಾನುವಾರ ಮಧ್ಯಾಹ್ನ ನೆರವೇರಿತು.

ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಅಂತಿಮ ನಮನ ಸಲ್ಲಿಸಿದರು.

ಶಿವರಾಂ ಪುತ್ರರಾದರವಿಶಂಕರ ಹಾಗೂ ಲಕ್ಷ್ಮೀಶ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಇದೇ ವೇಳೆ ಅಯ್ಯಪ್ಪ ಸ್ವಾಮಿ ಭಕ್ತರು ಪೂಜೆ ಸಲ್ಲಿಸಿದರು.

ADVERTISEMENT

ಇದಕ್ಕೂ ಮುನ್ನ ಶಿವರಾಂ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.