ಬೈಲಹೊಂಗಲ: ಪಟ್ಟಣದಲ್ಲಿ ಮಂಗಳವಾರ ರಾತ್ರಿ, ಚಿತ್ರನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಅದೃಷ್ಪವಶಾತ್ ಶಿವರಂಜನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಹಳೆಯ ಹಣಮಂತ ದೇವರ ದೇವಸ್ಥಾನ ಹತ್ತಿರದ ಅವರ ಮನೆ ಎದುರು ಗುಂಡಿನ ದಾಳಿ ನಡೆದಿದೆ. ಬೈಕ್ ಮೇಲೆ ಬಂದ ಆರೋಪಿ ಮೂರು
ಸುತ್ತು ಗುಂಡು ಹಾರಿಸಿದ. ಆದರೆ, ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಲ್ಲೇ ನಟ ಪಾರಾದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
ಆರೋಪಿ ಪರಾರಿಯಾಗಿದ್ದು, ಪತ್ತೆಗೆ ಜಾಲ ಬೀಸಲಾಗಿದೆ.
ಎಸ್ಪಿಡಾ.ಸಂಜೀವ ಪಾಟೀಲ, ಡಿಎಸ್ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಮೃತಸಿಂಧು, ರಾಜಾರಾಣಿ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿ ಶಿವರಂಜನ್ ನಾಯಕ ನಟರಾಗಿದ್ದಾರೆ.
ಅಮೃತಸಿಂಧು ಚಿತ್ರದ ಮೂಲಕ ಅವರು ದೊಡ್ಡ ಹೆಸರು ಮಾಡಿದ್ದರು. ನಟಿ ಶ್ರುತಿ ಇದರಲ್ಲಿ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.